ಕಸಾಪ ಮಹಾದ್ವಾರದಲ್ಲಿ ಕುಡಿಯುವ ನೀರಿನ ದಾಹ ತಣಿಸುಲು ಅರವಟ್ಟಿಗೆ ವ್ಯವಸ್ಥೆ

0
166

ಕಲಬುರಗಿ: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ನೀರಿನ ದಾಹ ಉಲ್ಬಣಿಸುತ್ತದೆ. ನಗರಕ್ಕೆ ಬರುವ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯಲು ನೀರಿನ ಸಮಸ್ಯೆ ಆಗುತ್ತದೆ. ಇದನ್ನು ಅರಿತು ನಗರ ಮತ್ತು ಬೇರೆ ಪ್ರದೇಶಗಳಿಂದ ಆಗಮಿಸುವ ಜನರ ಕುಡಿಯುವ ನೀರಿನ ದಾಹ ತಣಿಸುಲು ಕನ್ನಡ ಭವನದ ಮಹಾದ್ವಾರದ ಮುಂಭಾಗದಲ್ಲಿ ಅರವಟ್ಟಿಗೆ ಇಡುವ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತೊಂದು ಮಾನವೀಯತೆ ಮೆರೆಯುವ ಕಾರ್ಯ ಮಾಡಿದಂತಾಗಿದೆ.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜಗತ್ತಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ, ಅಂಗಾಂಗದಾನ ಎಷ್ಟು ಮುಖ್ಯವಾಗಿಯೋ ಅಷ್ಟೇ ದಾನಗಳಲ್ಲಿ ಶ್ರೇಷ್ಠದಾನ ಅಂದರೆ ನೀರಿನ ದಾನ ಅದಕ್ಕೆ ಜೀವಜಲ ಅನ್ನೋದೋ ಪ್ರಾಣಿ ಪಕ್ಷಿಗಳಿಗೂ ನಿರು ಅತ್ಯಾಮೂಲ್ಯವಾದದ್ದು ಎಂದು ಹೇಳಿದರು.

Contact Your\'s Advertisement; 9902492681

ಮುಂದುವರೆದು ಮಾತನಾಡಿದ ಅವರು, ಹಳ್ಳಿಯಿಂದ ನಾನಾ ಕೆಲಸಗಳಿಗೆ ಪಟ್ಟಣಕ್ಕೆ ಬರುವ ಬಡ ಜನರಿಗೆ ಹೋಟೆಲ್‍ನಲ್ಲಿ ಕುಡಿಯುವ ನೀರನ್ನು ಉಚಿತವಾಗಿ ನೀಡುವುದು ಕಷ್ಟ. ಆದ್ದರಿಂದ ನೀರಿನ ಮಹತ್ವ ಅರಿತು ಬೇಸಿಗೆಯಲ್ಲಿ ಬಿಸಿಲಿನ ದಾಹ ನೀಗಿಸಲು ಅರವಟ್ಟಿಗೆಗಳನ್ನು ಇರಿಸಲಾಗಿದೆ ಎಂದು ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷ ದಿನೇಶ ದೊಡ್ಮನಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಮಹಿಳಾ ಘಟಕದ ನಗರಾಧ್ಯಕ್ಷೆ ಡಾ. ನಾಗವೇಣಿ ಪಾಟೀಲ ಸಾರ್ವಜನಿಕರಿಗೆ ನೀರುವ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಕಸಾಪ ದ ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ರಾಜೇಂದ್ರ ಮಾಡಬೂಳ, ಡಾ. ಕೆ.ಗಿರಿಮಲ್ಲ,  ಪ್ರಮುಖರಾದ ಬಿ.ಎಂ.ಪಾಟೀಲ ಕಲ್ಲೂರ, ಲತಾ ಬಿಲಗುಂದಿ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಸುರೇಶ ದೇಶಪಾಂಡೆ, ಶಿವಕುಮಾರ ಸಿ.ಎಚ್.,  ಸುರೇಶ, ರವಿ ಹಾಗರಗಿ, ಶಿವಲಿಂಗ ಟೆಂಗಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here