ವಡಗೇರ: ತಾಲೂಕಿನ ಕುರಕುಂದ ಗ್ರಾಮ ಪಂಚಾಯತಿಯಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ, ರೋಜಗಾರ್ ದಿವಸ್ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಾಜರಿದ್ದ ಅಕುಶಲ ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ರಾಘವೇಂದ್ರ ಹೆಚ್ ವ್ಹಿ, ಸಹಾಯಕ ನಿರ್ದೇಶಕರು (ಗ್ರಾ. ಉ) ರವರು, ಅಕುಶಲ ಕೂಲಿ ಮೊತ್ತ ರೂ. 309 ರಿಂದ ರೂ. 316 ಕ್ಕೆ ಹೆಚ್ಚಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ನಿಯಮನುಸಾರ ಕೆಲಸ ನಿರ್ವಹಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ತಿಳಿಸಿದರು.
ಮುಖ್ಯವಾಗಿ ಮಹಿಳೆಯರು ಕೂಲಿ ಕೆಲಸದಲ್ಲಿ ಭಾಗವಹಿಸಿ ಹೆಚ್ಚಿನ ಹಣ ಸಂಪಾದನೆ ಮಾಡಿ, ಅದೇ ಹಣವನ್ನು ತಮ್ಮ ಸ್ವಸಹಾಯ ಸಂಘದಲ್ಲಿ ವಿನಿಯೋಗಿಸಿ, ಅಲ್ಲಿಂದ ಬರುವಂತಹ ಲಾಭದಿಂದ ಕೌಶಲ್ಯ ಅಭಿವೃದ್ಧಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ Iಇಅ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿ ಎಫ್ ಟಿ ಯವರು, ಅಕುಶಲ ಕೂಲಿಕಾರ್ಮಿಕರು ಭಾಗವಹಿಸಿದ್ದರು.