ಕಲಬುರಗಿ; ಅಸ್ಪೃಶ್ಯತೆ ನಿರ್ಮೂಲನೆಗೆ ಡಾ. ಬಿ.ಆರ್. ಅಂಬೇಡ್ಕರ್ ಶ್ರಮ ಶ್ಲಾಘಣೀಯ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಶುಕ್ರವಾರ ಡಾ.ಅಂಬೇಡ್ಕರ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಡಾ.ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ದೇಶದಲ್ಲಿ ತುಳಿತಕ್ಕೊಳಗಾದ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹೊಸ ಮಾರ್ಗಗಳನ್ನು ತೆರೆಯುವಲ್ಲಿ ಡಾ. ಅಂಬೇಡ್ಕರ್ ಅವರ ಕಾರ್ಯ ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದಲ್ಲಿ ವಿವಿಯ ಕುಲಸಚಿವ (ಮೌಲ್ಯಮಾಪನ) ಡಾ. ಬಸವರಾಜ ಮಠಪತಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ. ಶಿವಕುಮಾರ ಜವಳಗಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಡೀನ್ ಡಾ. ಶ್ರೀಕಾಂತ ಪಾಟೀಲ, ಟಿ.ವಿ. ಶಿವಾನಂದನ್ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಆಂಗ್ಲ ವಿಭಾಗದ ಚೇರಪರ್ಸನ್ ಪ್ರೊ. ಕಾವೇರಿ ಕಾಮಶೆಟ್ಟಿ ಸ್ವಾಗತಿಸಿದರೆ ಪೆÇ್ರ.ಸುನಿತಾ ಪಾಟೀಲ ವಂದಿಸಿದರು.