ಶಹಾಬಾದ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಶೇಕಡ 90% ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಆನೈನ್ ಮೂಲಕ ಅರ್ಜಿ ಸಂಘದಿಂದ ಆಹ್ವ್ವಾನಿಸಲಾಗಿದೆ.
ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಶಾಖೆ ಅಧ್ಯಕ್ಷರಿಂದ ದೃಢೀಕರಿಸಿ ಅರ್ಜಿ ಸಲ್ಲಿಸಬೇಕು. ಸಂಘದ ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಅರ್ಜಿ ಸಲ್ಲಿಸಲು ಮೇ 31 ಕೊನೆ ದಿನ ಆಗಿರುತ್ತದೆ ಎಂದು ಅಧ್ಯಕ್ಷರಾದ ಈರಣ್ಣ ಕೆಂಭಾವಿ ಕರ್ನಾಟಕ ರಾಜ್ಯಸರ್ಕಾರಿ ನೌಕರರ ಸಂಘ ತಾಲೂಕ ಶಾಖೆ ಶಹಾಬಾದ ಅವರನ್ನು 9008687224 ಹಾಗೂ ಪ್ರಧಾನ ಕಾರ್ಯದರ್ಶಿ ಸಂಜಯ ರಾಠೋಡ -9845479729 ಸಂಪರ್ಕಿಸಲು ತಿಳಿಸಿದ್ದಾರೆ.