ಕಲಬುರಗಿ: ಅಕ್ಕಮಹಾದೇವಿ ಕಾಲೋನಿಯಲ್ಲಿ ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರ ಜನ್ಮದಿನದ ನಿಮಿತ್ತ ಅವರ ಅಭಿಮಾನಿಗಳ ಬಳಗ ಹಾಗೂ ದಲಿತ ಸೇನೆ ಜಿಲ್ಲಾ ಅಧ್ಯಕ್ಷ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತು.
ಈ ಸಂದರ್ಭದಲ್ಲಿ ಸೇನೆಯ ನಗರ ಅಧ್ಯಕ್ಷ ಗುರು ಮಾಳಗೆ, ತಾಲೂಕ ಉಪಾಧ್ಯಕ್ಷ ಸಂಜು ಪಟ್ಟಣ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಾಲಿಮಿಯ್ ಗೊಬ್ಬುರಿಯ, ನಗರ ಪ್ರಧಾನ ಕಾರ್ಯದರ್ಶಿ ಪಂಚಶೀಲ್ ಚಂಬಾಳ್ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.