ಸುರಪುರ:ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸೇವೆಯಲ್ಲಿ ತನ್ನದೆ ಆದ ಛಾಪು ಮೂಡಿಸುತ್ತಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಶರಣು ಬಳಿ ಜಾಲಿಬೆಂಚಿಯವರನ್ನು ನೇಮಕಗೊಳಿಸಲಾಗಿದೆ ಎಂದು ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ಹಾಗೂ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುರಡ್ಡಿ ಅಮ್ಮಾಪುರ ತಿಳಿಸಿದ್ದಾರೆ.
ವೇದಿಕೆಯ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಶಿಸ್ತು ಮತ್ತು ನಾವೆಲ್ಲರು ಒಂದು ಎಂದು ಸಮಾಜದ ಏಳಿಗೆಗೆ ಅದರಲ್ಲಿ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳ ಏಳಿಗೆಗಾಗಿ ಹೋರಾಟವನ್ನು ರೂಪಿಸಿಕೊಂಡು ಸಂಘಟನೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅವರು ತಮ್ಮ ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.