ಸುರಪುರ: ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲಿನಿಂದ ಜಾನುವಾರುಗಳು ನಷ್ಟವುಂಟಾದ ಫಲಾನುಭವಿಗಳಿಗೆ ಸರಕಾರ ದಿಂದ ಮಂಜೂರಾದ ಪರಹಾರ ಧನದ ಚೆಕ್ನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ವಿತರಿಸಿದರು.
ನಗರದ ಶಾಸಕರ ಕಚೇರಿ ಆವರಣದಲ್ಲಿ ಮಂಗಳವಾರ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದ ಶಾಸಕರು,ಮಳೆ ಗಾಳಿಯಿಂದ ಸಿಡಿಲಿನಿಂದ ಹಾನಿಗೊಳಗಾದವರಿಗೆ ಸರಕಾರ ಪರಿಹಾರ ಶೀಘ್ರದಲ್ಲಿಯೇ ನೀಡುತ್ತಿದೆ,ಈಗ ನೀಡಿದವರನ್ನು ಹೊರತು ಪಡಿಸಿ ಇನ್ನುಳಿದವರಿಗೂ ಪರಿಹಾರದ ಚೆಕ್ಗಳು ಬರಲಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಿಡಿಲಿನಿಂದ ಜಾನುವಾರುಗಳನ್ನು ಕಳೆದುಕೊಂಡ 5 ಜನ ಫಲಾನುಭವಿಗಳಿಗೆ ಪರಿಹಾರದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.