ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಯುವ ಘಟಕದ ಸ್ಥಾನಕ್ಕೆ ಶಿವರಾಜ ಅಂಡಗಿ ರಾಜೀನಾಮೆ

0
161

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಅಪ್ಪಾರಾವ ಅಕ್ಕೋಣಿ ಹಾಗು ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶಿವರಾಜ ಅಂಡಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಪರಿಷತ್ತಿನ ಆಗಿನ ಜಿಲ್ಲಾ ಅಧ್ಯಕ್ಷರು ಹಾಗು ಈಗಿನ ರಾಜ್ಯಾಧ್ಯಕ್ಷರಾದ ಅಪ್ಪಾರಾವ ಅಕ್ಕೋಣಿ, ಪ್ರೊ. ಕುಪೇಂದ್ರ ಪಾಟೀಲ, ಮಲ್ಲಿಕಾರ್ಜುನ ವಡ್ಡನಕೇರಿ ಅವರು ನನಗೆ ಸುಮಾರು ಎರಡು ದಶಕಗಳ ಕಾಲ ಪರಿಷತ್ತಿನ ವಿವಿಧ ಹುದ್ದೆಗಳಾದ ಜಿಲ್ಲಾ ಸಂಚಾಲಕರಾಗಿ, ಜಿಲ್ಲಾ ಸಹ ಕಾರ್ಯದರ್ಶಿಗಳಾಗಿ, ಕಾರ್ಯದರ್ಶಿಯಾಗಿ ಜೊತೆಗೆ ಜಿಲ್ಲಾ ಯುವ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ನೀಡುವುದರ ಜೊತೆಗೆ ಮಾರ್ಗದರ್ಶನ ಮಾಡಿದ ಎಲ್ಲಾ ಪದಾಧಿಕಾರಿಗಳಿಗೆ ಋಣಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ವೈಯಕ್ತಿಕ ಕೆಲಸ ಕಾರಣಗಳಿಂದ ಪರಿಷತ್ತಿನ ಚಟುವಟಿಕೆಗಳು ನಿಲ್ಲಬಾರದೆಂಬ ಸದುದ್ದೇಶದಿಂದ ಆಸಕ್ತ ಯುವಕರನ್ನು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಮೂಲಕ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಮನವಿ ಮಾಡಿದ್ಧಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here