ಕಲಬುರಗಿ: ಯಾವುದೇ ಪೊಲೀಸ್ ಅಧಿಕಾರಿಗಳು ನನಗೆ ಕಿರುಕುಳ ನೀಡಿಲ್ಲ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಕಲಬುರಗಿ ನಗರದ ಸಂಚಾರಿ ಪೊಲೀಸ್ ಠಾಣೆ -1 ಕಾಂಸ್ಟೇಬಲ್ ಚಂದ್ರಕಾಂತ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ಪೊಲೀಸ್ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಎನ್ನಲಾಗಿರುವ ಸುದ್ದಿ ಸುಳ್ಳು. ನನಗೆ ಯಾರು ಕಿರುಕುಳ ನೀಡಿಲ್ಲ ಎಂದು ಆಸ್ಪತ್ರೆಯಿಂದ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಎರಡು ವರ್ಷಗಳಲ್ಲಿ ವರ್ಗಾವಣೆ ಮಾಡಿರುವ ಬಗ್ಗೆ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಐಪಿಎಸ್ ಚೇತನ್ ಆರ್ ಭೇಟಿ ನೀಡಿ ಮನವಿ ಮಾಡಿದೇನೆ ಅವರು ಸಮಸ್ಯೆ ಇತ್ಯಾರ್ಥ ಪಡಿಸುವ ಬಗ್ಗೆ ಭರವಸೆ ನೀಡಿದರು.
ನಗರದಲ್ಲಿ ಸಂಚಾರಿ ವ್ಯವಸ್ಥೆ ಸುಧಾರಣೆಗಾಗಿ ಸಾಕಷ್ಟು ಶ್ರಮಪಡುತ್ತಿರುವ ಪೊಲೀಸ್ ಆಯುಕ್ತರೊಂದಗೆ ನನಗೆ ಕೆಲಸ ಮಾಡಲು ನನಗೆ ಹೆಮ್ಮೆ ಇದೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ.