ನೀರಾವರಿ ಸಲಹಾ ಸಮಿತಿ ಸಭೆ ಕರೆಯಿರಿ-ಮಲ್ಲಿಕಾರ್ಜುನ ಸತ್ಯಂಪೇಟೆ

0
22

ಸುರಪುರ:ಮುಂಗಾರು ತಡವಾಗಿ ಆರಂಭಗೊಂಡಿದ್ದು ಈಗಾಗಲೇ ರೈತರು ಜಮೀನಗಳಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ನಿಧಾನವಾಗಿದೆ.ಆದ್ದರಿಂದ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆಯುಂತೆ ಹಾಗೂ ಬರಗಾಲದ ಪರಿಹಾರವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಒತ್ತಾಯಿಸಿದ್ದಾರೆ.

ಈ ಕುರಿತು ನಗರದ ಸತ್ಯಂಪೇಟೆಯಲ್ಲಿ ಹೇಳಿಕೆಯನ್ನು ನೀಡಿರುವ ಅವರು,ಮುಂಗಾರು ಇಲ್ಲದೆ ಇದುವರೆಗೂ ನಾರಾಯಣಪುರ ಜಲಾಶಯದಲ್ಲಿ ನೀರಿಲ್ಲದೆ ಕೃಷ್ಣಾ ಎಡದಂಡೆ ಕಾಲುವೆಗಳಿಗೆ ನೀರಿಲ್ಲದ್ದರಿಂದ ರೈತರು ಕಂಗಾಲಾಗಿದ್ದರು.ಈಗ ಮುಂಗಾರು ಆರಂಭಗೊಂಡಿದ್ದರಿಂದ ನಾರಾಯಣಪುರ ಜಲಾಶಯ ಭರ್ತಿಯಾಗುತ್ತಿದ್ದು ನದಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.ಆದ್ದರಿಂದ ಕೂಡಲೇ ಸರಕಾರ ಹಾಗೂ ನೀರಾವರಿ ಸಚಿವರು ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು ಕಾಲುವೆಗಳಿಗೆ ನೀರು ಹರಿಸುವತ್ತ ಕ್ರಮ ಕೈಗೊಳ್ಳಬೇಕು,ರೈತರ ಹಿತದೃಷ್ಟಿಯಿಂದ ಶೀಘ್ರವೆ ಸಲಹಾ ಸಮಿತಿ ಸಭೆ ಕರೆಯುವುದು ಅಗತ್ಯವಾಗಿದೆ ಎಂದು ಆಗ್ರಹಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here