ಕಲಬುರಗಿ; ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ನೀಡಿದ ಹೇಳಿಕೆಗೆ ಪರಿಶಿಷ್ಟ ಪಂಗಡ ವಿಭಾಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗುರುರಾಜ ಎಚ್ ಸುಬೇದಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದು, ಸೋಲಿನಹತಾಶೆಯಿಂದ ಹೊರಬರಲಾರದೆ ತಲೆ ಮತ್ತು ಮನಸ್ಸಿಗೆ ಸಂಬಂಧವಿಲ್ಲದಂತೆ ಹೇಳಿಕೆ ನೀಡುತ್ತಿರುವದು ನೋಡಿದರೆ ಮಾಜಿಗೃಹ ಸಚಿವ ಆರಗ ಜ್ಞಾನೇಂದ್ರ ಇವರಿಗೆ ಬುದ್ಧಿಭ್ರಮಣೆಯಾಗಿದೆ ಎಂಬ ಸಂಶಯ ಕಂಡುಬರುತ್ತದೆ.
ಮುತ್ಸದ್ದಿ ಹಾಗೂ ಅನುಭವಿರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಮಾಧ್ಯಮದ ಮುಂದೆ ಹೇಳಿಕೆ ನೀಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಲಿ.ಇದೆ ರೀತಿ ಮುಂದುವರೆದರೆ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ. ಅವರು ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.