ಶಹಾಬಾದ: ತಾಲೂಕಿನ ಮರತೂರ ಗ್ರಾಮದ ಕಾಶಿ ವಿಶ್ವನಾಥ ದೇವಾಲಯದಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳ ಪರ್ಯಂತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ರವಿ ನರೋಣಿ ಹಾಗೂ ಬಸವರಾಜ ಪಾಳಾ ತಿಳಿಸಿದ್ದಾರೆ.
ಪ್ರತಿ ನಿತ್ಯ ಬೆಳಿಗ್ಗೆ ಬಿಲ್ವಾರ್ಚನೆ, ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ನಡೆಯಲಿದೆ.ಅಲ್ಲದೇ ಬಸವ ದಳದ ಸದಸ್ಯರಿಂದ ಇಷ್ಟಲಿಂಗ ಪೂಜೆ, ಭಜನೆ ಹಾಗೂ ಪ್ರವಚನ ಕಾರ್ಯಕ್ರಗಳು ಜರುಗಲಿದ್ದು, ಇದರಲ್ಲಿ ಸದಭಕ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.