ಕಲಬುರಗಿ: ನಾಗನಹಳ್ಳಿ ಕ್ರಾಸ್ ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಆಗಮಿಸಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ, ಭನಶಂಕರ್ ಅಂಗಡಿ, ಗುರುದೇವ ಕಳಸಕರ್, ರವಿರಾಜ ಕೋರವಿ, ಚಂದ್ರಶೇಖರ ಹಾವೇರಿ, ಶರಣು ಬಿರಾದಾರ ಹಾಗೂ ಮಾಜಿ ಪಾಲಿಕೆ ಸದಸ್ಯ ರಾಹುಲ ಹೋನ್ನಳ್ಳಿ ಸೇರಿದಂತೆ ಮಾಲಾಧಾರಿಗಳು ಇದ್ದರು.