ಚಿಂಚೋಳಿಯಲ್ಲಿ ವೃದ್ಧನಿಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಸಾವು

0
43

ಕಲಬರಗಿ: ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ವೃದ್ಧನಿಗೆ ಕೆಕೆಆರ್ಟಿಸಿ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಂಚೋಳಿ ತಾಲ್ಲೂಕಿನ ಯಂಪಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಯಂಪಳ್ಳಿ ಗ್ರಾಮದ ನಿವಾಸಿ ಬಕ್ಕಯ್ಯ ಯಲ್ಲಯ್ಯ (65) ಮೃತಪಟ್ಟ ವೃದ್ಧ ಎಂದು ಗುರುತಿಸಲಾಗಿದ್ದು, ಗ್ರಾಮದ ಸಮೀಪ ಬಯಲು ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ಬಕ್ಕಯ್ಯ ಅವರಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಗ್ರಾಮದಲ್ಲಿ ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here