ಮಡಿವಾಳ ಅಭಿವೃದ್ಧಿ ನಿಗಮಕ್ಕೆ ನಾಮನಿರ್ದೇಶಿಸಲು ಒತ್ತಾಯ

0
47

ಶಹಾಬಾದ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ಚಂದ್ರಕಾಂತ ಮಲ್ಲಿಕಾರ್ಜುನ ಮಡಿವಾಳ ಅವರನ್ನು ನಾಮ ನಿರ್ದೇಶಿತ ನಿರ್ದೇಶಕರನ್ನಾಗಿ ನೇಮಿಸಬೇಕೆಂದು ತಾಲೂಕಾ ಮಡಿವಾಳ ಸಮಾಜದ ಪ್ರಧಾನ ಕಾರ್ಯದರ್ಶಿ ಬಸವರಾಜ ಪರೀಟ್, ಶರಣಗೌಡ ದಳಪತಿ, ಸುರೇಶ ಮೆಂಗನ್ ಸೇರಿದಂತೆ ಅನೇಕರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಒತ್ತಾಯಿಸಿದ್ದಾರೆ.

ಚಂದ್ರಕಾಂತ ಮಡಿವಾಳ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಮಡಿವಾಳ ಸಮಾಜದ ಜಾಗೃತಿ ಮತ್ತು ಸಂಘಟನೆಗಳಲ್ಲಿ ತೊಡಿಸಿಕೊಂಡಿದ್ದಾರೆ. ಕರ್ನಾಟಕ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಆದ್ದರಿಂದ ಚಂದ್ರಕಾಂತ ಅವರನ್ನು ಕಲ್ಯಾಣ ಕರ್ನಾಟಕ ಭಾಗದಿಂದ ವಿಶೇಷ ಆದ್ಯತೆಯನ್ನು ನೀಡಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here