ಸುರಪುರ:ನವೆಂಬರ್ 1 ರಂದು ತಹಸೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ದಿಂದ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಹಸೀಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ನವೆಂಬರ್ 1ರಂದು ಬೆಳಿಗ್ಗೆ 8 ಗಂಟೆಗೆ ಎಲ್ಲಾ ಕಚೇರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಿ,ನಂತರ 8:45ಕ್ಕೆ ತಹಸೀಲ್ ಕಚೇರಿ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು,ಕಾರ್ಯಕ್ರಮದಲ್ಲಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಪಾಟೀಲ್,ಕ್ಷೇತ್ರಶಿಕ್ಷಣಾಧಿಕಾರಿ ವಸಂತಕುಮಾರ ಶಾಬಾದಕರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ ಭೀಮು ನಾಯಕ ಮಲ್ಲಿಬಾವಿ,ಹಣಮೆಗೌಡ ಶಖಾಪುರ,ರಂಗನಾಥ ಬಿರಾದಾರ,ಅಯ್ಯಪ್ಪ ವಗ್ಗ,ರಾಜು ದೇವರಗೋನಾಲ,ಅರ್ಜುನ ಬೈರಿಮಡ್ಡಿ,ಮಹಾರಾಜ ಬೈರಿಮಡ್ಡಿ,ಮಹ್ಮದ್ ಗಯಾಜ್,ಶ್ರೀನಿವಾಸ ನಾಯಕ,ಹೆಚ್.ಬಿ ಪಾಟೀಲ್,ಮೌನೇಶ ದಳಪತಿ ಶಖಾಪುರ,ನಾಗರಾಜ ಸುರಪುರ,ಹಣಮಂತ್ರಾಯ ಹಾಲಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.