ಶ್ರೀ ಬಸವರಾಜ ದೇಶಮುಖ ರವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಮನವಿ

0
30

ಕಲಬುರಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತಕ್ಕೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಆಗಿರುವ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ರವರನ್ನು ಅದ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾಗಲಿಂಗಯ್ಯ ಮಠಪತಿ ಮನವಿ ಮಾಡಿದ್ದಾರೆ

ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದಲ್ಲಿರುವ ಆರ್ಥಿಕವಾಗಿ ಹಿಂದುಳಿದವರನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸಬಲೀಕರಣಗೊಳಿಸುವ ಸದುದ್ದೇಶದಿಂದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತವನ್ನು ಸ್ಥಾಪಿಸಲಾಗಿದ್ದು, ಇದರ ಮೂಲಕ ನಾಡಿನ ವೀರಶೈವ ಲಿಂಗಾಯತ ಸಮುದಾಯದವರನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸಧೃಡಗೊಳಿಸಲು ನಿಗಮ ಪ್ರಾರಂಭಿಸಿದ್ದು ಸ್ವಾಗತಾರ್ಹವಾಗಿದ್ದು, ಹಿಂದೆ ಪಕ್ಷಾತೀತವಾಗಿ ಹಿರಿಯರಾದ ಶ್ರೀ ಬಿ.ಎಸ್.ಪರಮಶಿವಯ್ಯ ರವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

Contact Your\'s Advertisement; 9902492681

ಪ್ರಸ್ತುತ ನೂತನ ಸರ್ಕಾರ ವೀರಶೈವ ಲಿಂಗಾಯತ ಸಮುದಾಯದವರು ಅಧಿಕವಾಗಿ ಹೊಂದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಅನೇಕ ದಶಕಗಳಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಕಾರ್ಯನಿರ್ವಹಿಸುತ್ತಿರುವ ಹೊರಟಿರುವ ಶ್ರೀ ಬಸವರಾಜ ದೇಶಮುಖ ರವರು ಅತ್ಯಂತ ಸಮಾಜಮುಖಿ ಚಿಂತನೆಗಳುಳ್ಳವರಾಗಿದ್ದು ಮತ್ತು ಎಲ್ಲರಲ್ಲೂ ಬೆರೆತು ಸಮಾಜ ಕಟ್ಟುವ ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಲ್ಯಾಣ ಕರ್ನಾಟಕದ ಬಗ್ಗೆ ಬಹುದೊಡ್ಡ ಕನಸನ್ನು ಹೊಂದಿದ್ದು, ಹೀಗಾಗಿ ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವುದು ಅತ್ಯಂತ ಸಮಂಜಸವಾಗಿದೆ.

ಹೀಗಾಗಿ ಈ ಬಾರಿಯೂ ಸಹ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತಕ್ಕೆ ವೀರಶೈವ ಲಿಂಗಾಯತ ಸಮುದಾಯದ ಹಿರಿಯರಾದ ಶ್ರೀ ಬಸವರಾಜ ದೇಶಮುಖ ರವರನ್ನು ಪಕ್ಷಾತೀತವಾಗಿ ನೇಮಕ ಮಾಡುವ ಮೂಲಕ ನಿಗಮದ ಯೋಜನೆಗಳನ್ನು ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯವಾಗಲಿದ್ದು, ಇದರ ಮೂಲಕ ಸಮುದಾಯದ ಏಳ್ಗೆ ಸಾಧ್ಯವಾಗಲಿದ್ದು ಮತ್ತು ಸಮುದಾಯದ ಬಾಂಧವರು ಅಧಿಕ ಸಂಖ್ಯೆಯಲ್ಲಿರುವ ಈ ಭಾಗಕ್ಕೂ ಮತ್ತು ಸಮುದಯಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮಠಪತಿಯವರು ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here