ಕಲಬುರಗಿ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28 ರಂದು ಜಿಲ್ಲೆ ಮತ್ತು ತಾಲೂಕು ಆಡಳಿತ ಆಯೋಜಿಸುವ ಅದ್ದೂರಿಯಾಗಿ ಆಚರಣೆಯಲ್ಲಿ ತಳವಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಲ್ಯಾಣ ಕರ್ನಾಟಕ ತಳವಾರ್ ಹೋರಾಟ ಸಮಿತಿಯ ಅಧ್ಯಕ್ಷ ಸಂತೋಷ್ ತಳವಾರ್ ಕರೆ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಮಾಡಬೇಕೆಂಬುದು ನಮ್ಮ ತಳವಾರ ಸಮುದಾಯ ಜನರ ಆಶಯವಾಗಿದೆ ಎಂದು ಗುರುನಾಥ್ ಹಾವನೂರು, ಅಶೋಕ್ ತಳವಾರ್, ಯಲ್ಲಪ್ಪ ತಳವಾರ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದರು.