ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ಭಾಗದ ವಕ್ತಾರರಾಗಿ ಯುವ ಹೋರಾಟಗಾರ ಆನಂದ ತೆಗನೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಈ ಗುರುತರವಾದ ಜವಾಬ್ದಾರಿಯನ್ನು ಕೂಡಲೇ ವಹಿಸಿಕೊಂಡು ಸಮಿತಿಯ ಕಾರ್ಯಚಟುವಟಿಕೆಗಳಲ್ಲಿ ತೊಡಗುವಂತೆ ಸೂಚಿಸಲಾಗಿದೆ ಎಂದು ಅವರು ಆದೇಶ ಪತ್ತದಲ್ಲಿ ತಿಳಿಸಿದ್ದಾರೆ.