ಕಲಬುರಗಿ; ವಿಮಾನ ನಿಲ್ದಾಣದಲ್ಲಿ ಸಮಾಜ ಕಲ್ಯಾಣ ಮಂತ್ರಿಗಳಾದ ಎಚ್. ಸಿ. ಮಹದೇವಪ್ಪ ಅವರನ್ನು ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ ಜಿಲ್ಲಾ ಜಯಂತೋತ್ಸವ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ದಿನೇಶ ದೊಡ್ಡಮನಿ ಅವರ ನೇತೃತ್ವದಲ್ಲಿ ಭೇಟಿಮಾಡಿ ಬುದ್ಧ ಪೂರ್ಣಿಮೆಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಮತ್ತು ರಜೆಯನ್ನು ಘೋಷಿಸುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ಮನವಿಗೆ ಸ್ಪಂದಿಸಿದ ಸಚಿವರು ಬುದ್ಧ ಪೂರ್ಣಿಮೆ ಮಾಡೋಣ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂತೋಷ್ ಮೇಲ್ಮನಿ, ರುಕ್ಮೇಶ್ ಭಂಡಾರಿ ಇದ್ದರು.