ಚಿಂಚೋಳಿ: ಕರ್ತವ್ಯ ಲೋಪ ಶಿಕ್ಷಕ ಅಮಾನತು

0
191

ಕಲಬುರಗಿ: ಮೇಲಧಿಕಾರಿಗಳ ಗಮನಕ್ಕೆ ತರದೆ ರಜೆಗೆ ಹೋಗಿ ಕರ್ತವ್ಯ ಲೋಪ ವೇಸಗಿದ್ದ ಹಿನ್ನೆಲೆ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಒರ್ವರಿಗೆ ಅಮಾನತು ಗೊಳಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಚಿಂಚೋಳಿ ತಾಲ್ಲೂಕಿನ ಶಾದಿಪೂರ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾಗಿದ್ದ ಸಾಬ್ಬಣ್ಣ ಅಮಾನತು ಗೊಂಡ ಶಿಕ್ಷಕ. ಮೇಲಾಧಿಕಾರಿಗಳ ಗಮನಕ್ಕೆ ತರದೆ ರಜೆ ಮೇಲೆ ಹೋಗಿರುವುದು ಹಾಗೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಮರ್ಪಕವಾಗಿ ವಿತರಿಸದೆ ಮತ್ತು ಆಹಾರ ಸಾಮಗ್ರಿಗಳ ಖರ್ಚು,ಹಣಕಾಸಿನ ಖರ್ಚು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೆ ಕರ್ತವ್ಯಲೋಪವೆಂದು ಪರಿಗಣಿಸಿ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಜಿ ಬಿರಾದಾರ ಆದೇಶದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here