ಕಲಬುರಗಿ: ನ್ಯಾಯಾಲಯಕ್ಕೆ ತೆರಳುವ ವೇಳೆ ಬೆನ್ನಟ್ಟಿ ಅಪಾರ್ಟ್ಮೆಂಟ್ ಒಂದರಲ್ಲಿ ಗುರುವಾರ ಬೆಳಿಗ್ಗೆ ವಕೀಲರಾದ ಈರಣ್ಣ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಉದನೂರ ಗ್ರಾಮದ ನಿವಾಸಿಗಳಾದ ನಿಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ, ಸಿದ್ದಣ್ಣಗೌಡ, ಸಿದ್ರಾಮ, ಅವ್ವಣ್ಣ ಹಾಗೂ ಗುರು ಎಂಬುವವರ ಮೇಲೆ ನಗರದ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿದೆ ಎನ್ನಲಾಗುತ್ತಿದ್ದು, ಕೊಲೆಯಾದ ಈರಣ್ಣ ಅವರ ಪತ್ನಿ ಗುಲಬರ್ಗಾ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.