ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘ ಬೀದರ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಬೆಂಗಳುರು ವತಿಯಿಂದ ಪ್ರತಿ ವರ್ಷ ಕೊಡಮಾಡುವ “ಶೇಖ್ ಫಾತಿಮಾ ಶಿಕ್ಷಣ ಸೇವಾ ರತ್ನ ಪ್ರಶಸ್ತಿ”ಗೆ ಕಲ್ಬುರ್ಗಿ ಜಿಲ್ಲೆಯ ಖಣದಾಳ ಸರಕಾರಿ ಪ್ರೌಢ ಶಾಲೆಯ ಕನ್ನಡ ಭಾμÁ ಶಿಕ್ಷಕಿ ಪರ್ವೀನ್ ಸುಲ್ತಾನಾ ಅವರು ಆಯ್ಕೆಯಾಗಿದ್ದಾರೆ.
ಜ. 7ರಂದು ಬೀದರ ನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಶಿಕ್ಷಕಿ ಪರ್ವೀನ್ ಸುಲ್ತಾನಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.