ಸುರಪುರ: ತಾಲೂಕು ಆಡಳಿತ ದಿಂದ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನರ 612 ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸುರಪುರ ಶಾಸಕರಾದ ರಾಜ ವೆಂಕಟಪ್ಪನಾಯಕ ಅವರು ಭಾಗವಹಿಸಿದ್ದರು.ತಹಸಿಲ್ದಾರ್ ಕೆ.ವಿಜಯಕುಮಾರ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಿಠಲ್ ಯಾದವ್,ವೆಂಕೋಬ ಸಾಹುಕಾರ,ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ,ಮಲ್ಲಣ್ಣ ಸಾಹುಕಾರ ಜಾಲಿಬೆಂಚಿ,ಬಸವರಾಜ್ ಉಟ್ಕುರ್, ಶರಣು ಬಳಿ ಜಾಲಿಬೆಂಚಿ,ರವಿ ಹಾಗೂ ಸಮಾಜದ ಮುಖಂಡರು ಮತ್ತು ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.