ಸದ್ಭಾವನಾ ಪ್ರಶಸ್ತಿ ಪುರಸ್ಕøತ ಪಾಟೀಲಗೆ ವಿವಿಧ ಸಂಘ-ಸಂಸ್ಥೆಗಳಿಂದ ಗೌರವ ಸತ್ಕಾರ

0
29

ಕಲಬುರಗಿ: ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪುರಷ್ಕøತ ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಅವರಿಗೆ ನಗರದ ಎಂ.ಜಿ.ರೋಡ್ ಕ್ರಾಸ್ ಸಮೀಪವಿರುವ ‘ಅಹ್ಸಾನ್ ಡಿಸೈನ್ ಸ್ಟುಡಿಯೋ’ದಲ್ಲಿ ‘ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ & ಕಲ್ಚರ್’ ಮತ್ತು ‘ನೀಲಾ ಆರ್ಟ್ ಸ್ಟುಡಿಯೋ’ ಮತ್ತು ಚಿತ್ರ ಕಲಾವಿದರ ಬಳಗದ ವತಿಯಿಂದ ಗುರುವಾರ ಸಂಜೆ ಸತ್ಕರಿಸಿ ಅಭಿನಂದಿಸಲಾಯಿತು.

ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದರಾದ ಡಾ.ಸುಬ್ಬಯ್ಯ ಎಂ.ನೀಲಾ ಮತ್ತು ಡಾ.ರೆಹಮಾನ್ ಪಟೇಲ್ ಮಾತನಾಡಿ, ಎಚ್.ಬಿ.ಪಾಟೀಲ ಅವರಿಗೆ ಈ ಪ್ರಶಸ್ತಿ ದೊರಕಿರುವುದು ಅತ್ಯಂತ ಸೂಕ್ತವಾಗಿದೆ. ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರನ್ನು ಆಯ್ಕೆ ಮಾಡಿದ ಸಂಸ್ಥೆಯು ಕೂಡಾ ಅಭಿನಂದನಗೆ ಪಾತ್ರವಾಗುತ್ತದೆ. ಪಾಟೀಲ ಅವರಂತಹ ನಿಸ್ವಾರ್ಥ ಸಮಾಜ ಸೇವಕರ ಸಂಖ್ಯೆ ಪ್ರಸ್ತುತ ಸಂದರ್ಭದಲ್ಲಿ ಹೆಚ್ಚಾಗಬೇಕಾಗಿದೆ ಎಂದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಶಿವಯೋಗೆಪ್ಪಾ ಎಸ್.ಬಿರಾದಾರ, ಸೈಯದ್ ಮುಸ್ತಫಾ, ಶೇಖ್ ಅಹ್ಸನ್, ಶೇಖ್ ಇಮ್ರಾನ್, ಮೊಹಮ್ಮದ್ ಯೂಸುಫ್ ಸೇರಿದಂತೆ ಇನ್ನಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here