ಕಲಬುರಗಿ: ಶಿಕ್ಷಣ ಪ್ರೇಮಿ ಹಾಗೂ ಮಾಜಿ ಶಾಸಕ ಡಾ ನಾಗರೆಡ್ಡಿ ಪಾಟೀಲ್ ಅವರ ನಿಧನಕ್ಕೆ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಕಂಬನಿ ಮಿಡಿದಿದ್ದಾರೆ.
ಸೇಡಂ ಪಟ್ಟಣದ ಹೊರವಲಯದಲ್ಲಿ ಜಮೀನಿನಲ್ಲಿ ಡಾ ನಾಗರೆಡ್ಡಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ರಾಧಾಕೃಷ್ಣ ಅವರು ಶ್ರೀಯುತರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯ ಎಂದರು.
ಶಾಸಕರಾಗಿ ಸಾರ್ವಜನಿಕ ಜೀವನದಲ್ಲಿಯೂ ಕೂಡಾ ಡಾ ನಾಗರೆಡ್ಡಿ ಅವರು ಜನರ ಕಷ್ಟಗಳಿಗೆ ಸ್ಪಂದಿಸಿ ಜನಾನುರಾಗಿ ಎನಿಸಿಕೊಂಡಿದ್ದರು.
ಶ್ರೀಯುತರ ನಿಧನದ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದರು.