ಡಾ.ಸಿದ್ದಯ್ಯ ಪುರಾಣಿಕ ಸಾಹಿತ್ಯ ಪ್ರಶಸ್ತಿಗೆ `ರಾಜಗಂಭೀರ’ ಕೃತಿ ಆಯ್ಕೆ

0
57

ಬೆಂಗಳೂರು: ಡಾ.ಸಿದ್ದಯ್ಯ ಪುರಾಣಿಕ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ `ಡಾ.ಸಿದ್ದಯ್ಯ ಪುರಾಣಿಕ ಸ್ಮಾರಕ ಸಾಹಿತ್ಯ ಪ್ರಶಸ್ತಿ’ಯನ್ನು ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಕಲಬುರಗಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಅವರ `ರಾಜಗಂಭೀರ’ ಗ್ರಂಥಕ್ಕೆ ಲಭಿಸಿದೆ.

ಆಗಸ್ಟ್ 24 ರಂದು ಕೊಪ್ಪಳದಲ್ಲಿ ಡಾ. ಸಿದ್ದಯ್ಯ ಪುರಾಣಿಕ ಸ್ಮಾರಕ ಟ್ರಸ್ಟ್ ಮತ್ತು ಕೊಪ್ಪಳ ಜಿಲ್ಲಾ ನಾಗರಿಕರ ಸಾಂಸ್ಕøತಿಕ ವೇದಿಕೆ ವತಿಯಿಂದ ನಡೆಯಲಿರುವ 17 ನೆಯ ಜಿಲ್ಲಾ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಾದವಾಡಗಿ ಹಾಗೂ ಸಂಚಾಲಕ ಮಹೇಶ್ ಬಾಬು ತಿಳಿಸಿದ್ದಾರೆ.

Contact Your\'s Advertisement; 9902492681

ಸೇಡಂನ ಮಾಜಿ ಶಾಸಕರು, ಶಿಕ್ಷಣ ಪ್ರೇಮಿಗಳು ಹಾಗೂ ಕೃಷಿಕರು ಆಗಿದ್ದ ಡಾ.ನಾಗರೆಡ್ಡಿ ಪಾಟೀಲ ರವರ ಜೀವನಗಾಥೆ ಇರುವ ಈ ಗ್ರಂಥವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈಚೆಗೆ ಬೆಂಗಳೂರಿನಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here