17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

0
32

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ  ಪ್ರಮಾಣ ವಚನ ಸ್ವೀಕರಿಸಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಐವಾನ್ ಡಿ’ ಸೋಜಾ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕಿಸ್ ಬಾನು, ಎನ್.ಎಸ್. ಬೋಸರಾಜು, ಡಾ.ಯತೀಂದ್ರ ಎಸ್., ಎ.ವಸಂತ ಕುಮಾರ, ಭಾರತೀಯ ಜನತಾ ಪಾರ್ಟಿಯ ಮುಲೆ ಮಾರುತಿರಾವ್, ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಜಾತ್ಯಾತೀತ ಜನತಾದಳದ ಟಿ.ಎನ್. ಜವರಾಯಿ ಗೌಡ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನಿಂದ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಆಯ್ಕೆಯಾದ ಡಾ.ಚಂದ್ರಶೇಖರ ಬಸವರಾಜ ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆಯ್ಕೆಯಾದ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾದ ಡಿ.ಟಿ.ಶ್ರೀನಿವಾಸ (ಡಿ.ಟಿ.ಎಸ್.), ಭಾರತೀಯ ಜನತಾ ಪಾರ್ಟಿಯಿಂದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆಯಾದ ಡಾ.ಧನಂಜಯ್ ಸರ್ಜಿ, ಜಾತ್ಯಾತೀತ ಜನತಾದಳದಿಂದ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾದ ಎಸ್.ಎಲ್.ಭೋಜೇಗೌಡ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾದ ಕೆ.ವಿವೇಕಾನಂದ ಅವರುಗಳು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್‍ನ ಸದಸ್ಯರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

Contact Your\'s Advertisement; 9902492681

ವಿಧಾನಪರಿಷತ್‍ಗೆ ಆಯ್ಕೆಯಾದ ಎಲ್ಲಾ ಸದಸ್ಯರುಗಳಿಗೆ ವಿಧಾನ ಪರಿಷತ್‍ನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here