ಸುರಪುರ: ಚಿತ್ರದುರ್ಗದಲ್ಲಿ ನಡೆಸಲಾದ 2022-23ನೇ ಸಾಲಿನ ವಚನ ಕಮ್ಮಟ ಪರೀಕ್ಷೆಯಲ್ಲಿ ಪಟ್ಟಣದ ಸರಕಾರಿ ಕನ್ಯಾ ಮಾಡದರಿಯ ಹಿರಿಯ ಪ್ರಾಥಮಿಕ ಶಾಲೆ ದರ್ಬಾರ ಇಲ್ಲಿಯ ವಿದ್ಯಾರ್ಥಿನಿ ನೇತ್ರಾ ಶಾಂತಯ್ಯ ಇವರು ರಾಜ್ಯಕ್ಕೆ ತೃತೀಯ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಮಹಾಲಕ್ಷ್ಮೀ ಸಹ ಶಿಕ್ಷಕಿ ಇವರಿಗೆ ಉತ್ತಮ ಸಂಯೋಜಕಿ ಹಾಗೂ ಮಾರ್ಗದರ್ಶಿ ಎಂದು ಶಿಕ್ಷಣ ಪ್ರೇಮಿ ಪ್ರಶಸ್ತಿಯನ್ನು ಮುರುಘಾಮಠದ ಶ್ರೀಗಳಾದ ಬಸವಪ್ರಭು ಸ್ವಾಮೀಜಿ ನೀಡಿ ಗೌರವಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಪ್ರಧಾನ ಗುರುಗಳಾದ ಸೋಮರಡ್ಡಿ ಮಂಗಿಹಾಳ,ಶಿಕ್ಷಕರಾದ ಶ್ರೀಶೈಲ ಯಂಕಂಚಿ ಹಾಗೂ ಸಿಬ್ಬಂದಿಯವರು ಅಭಿನಂಧಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.