ಸುರಪುರ: ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಸಮರ್ಪಕ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟ ದಿಂದ ನಗರದ ಬಸ್ ನಿಲ್ದಾಣದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ತಾಲೂಕಿನ ವಾಗಣಗೇರಾ ಗ್ರಾಮ ಪಂಚಾಯತಿ ಸೇರಿದಂತೆ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಬೋಗಸ್ ಜಾಬ್ ಕಾರ್ಡ್ಗಳಿದ್ದು ತನಿಖೆ ನಡೆಸಿ ರದ್ದುಗೊಳಿಸಬೇಕು.
ಉದ್ಯೋಗ ಖಾತ್ರಿ ಕಾಮಗಾರಿಗಳು ಬೋಗಸ್ ಆಗಿದ್ದು ತನಿಖೆ ಮಾಡಬೇಕು.ಅಲ್ಲದೆ ಕಳೆದ 29 ರಂದು ಪೊಲೀಸ್ ಠಾಣೆಯಲ್ಲಿ ನಡೆದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ಸಭೆಯಲ್ಲಿ ಸಲ್ಲಿಸಿರುವ ಬೇಡಿಕೆಗಳನ್ನು ತಹಸಿಲ್ದಾರರು ನಿರ್ಲಕ್ಷ್ಯ ತೋರದೆ ಕೂಡಲೇ ಈಡೇರಿಸಬೇಕು,ಇಲ್ಲವಾದಲ್ಲಿ ಸುರಪುರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸಿಲ್ದಾರ್ ಕಚೇರಿ ಸಿರಸ್ತೆದಾರ ಗುರುಬಸಪ್ಪ ಪಾಟೀಲ್ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ರಾಜು ದರಬಾರಿ,ತಾಲೂಕ ಅಧ್ಯಕ್ಷ ಕೇಶವ ನಾಯಕ,ಕಾರ್ಯದರ್ಶಿ ಹಣಮಂತ್ರಾಯ ಸೇರಿದಂತೆ ಅನೇಕರಿದ್ದರು.