ಶರಣಗೌಡ ಪಾಟೀಲ್ ಪಾಳಾ – ಪ್ರೊ ಯಶವಂತರಾಯ ಅಷ್ಠಗಿಗೆ ಸನ್ಮಾನ

0
75

ಕಲಬುರಗಿ: ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಜೂನ ತಿಂಗಳ ೧೬ ನೇ ತಾಲೂಕಿನಂದು, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪಾ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಅಭೂತಪೂರ್ವ ಯಶಸ್ಸಿಗಾಗಿ ಟ್ರಸ್ಟ್ ಅಧ್ಯಕ್ಷ ಹಾಗೂ ಪತ್ರಕರ್ತ ಶರಣಗೌಡ ಪಾಟೀಲ್ ಪಾಳಾ ಹಾಗೂ ಸಮ್ಮೇಳನದ ಸಂಚಾಲಕರು ಆದ ಲೇಖಕ ಹಾಗೂ ಕೃಷಿಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ ಯಶವಂತರಾಯ ಅಷ್ಠಗಿ ಅವರಿಗೆ ಕಲಬುರಗಿಯ ಜಯನಗರ ಶಿವ ಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಹೋರಾಟಗಾರ ಲಿಂಗರಾಜ ಸಿರಗಾಪೂರ್, ಮಾಜಿ ಮಹಾನಗರ ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ, ಪದಾಧಿಕಾರಿಗಳಾದ ಸೂರ್ಯಕಾಂತ ಕೆ ಬಿ, ಬಂಡೆಪ್ಪ ಕೇಸೂರ ಹಾಗರಗಿ, ವಿರೇಶ ದಂಡೋತಿ, ಅನುರಾಧ ಕುಮಾರಸ್ವಾಮಿ, ಸುಜಾತಾ ಭೀಮಳ್ಳಿ, ಸೇರಿದಂತೆ ಜಯನಗರ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಕಲಬುರಗಿ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಕುರಿತ “ಶರಣರ ಶಕ್ತಿ” ಎಂಬ, ಮುಂದಿನ ತಿಂಗಳ ೧೮ ನೇ ತಾಲೂಕಿನಂದು ರಾಜ್ಯದಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಚಲನಚಿತ್ರದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here