ಹೋರಾಟಗಾರರ ರಾಷ್ಟ್ರ ಪ್ರೇಮ ನಮ್ಮೆಲ್ಲರ ಬದುಕಿಗೆ ಪ್ರೇರಣೆ

0
45

ಶಹಾಬಾದ: ಮಹಾನ್ ನಾಯಕರ ತ್ಯಾಗ ಬಲಿದಾನಗಳ ಫಲವಾಗಿ ಹೈದ್ರಬಾದ ಕರ್ನಾಟಕ ಪ್ರದೇಶ ನಿಜಾಮಶಾಹಿ ಕಪಿ ಮುಷ್ಠಿಯಿಂದ ಬಿಡುಗಡೆಗೊಂಡಿತು, ಹೋರಾಟ ಮಾಡಿದ ನಾಯಕರ ರಾಷ್ಟ್ರ ಪ್ರೇಮ ನಮ್ಮೆಲ್ಲರ ಬದುಕಿಗೆ ಪ್ರೇರಣೆಯಾಗಬೇಕು ಎಂದು ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ ಹೇಳಿದರು.

ಅವರು ಮಂಗಳವಾರ ನಗರದ ತಹಸೀಲ್ದಾರ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.

Contact Your\'s Advertisement; 9902492681

ಕಲ್ಯಾಣ ಕರ್ನಾಟಕದ ಜನರು ಸ್ವಾತಂತ್ರ್ಯಕ್ಕಾಗಿ ಎರಡು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ ಇತಿಹಾಸವಿದೆ.ಒಂದು ಬ್ರಟಿಷರ ವಿರುದ್ಧ, ಮತ್ತೊಂದು ನಿಜಾಮನ ವಿರುದ್ಧ ಎಂಬುದು ಅರಿಯಬೇಕು.ನಿಜಾಮ ಕೆಟ್ಟ ಆಡಳಿತ ಈ ಭಾಗದ ಜನರು ಕಷ್ಟ ಕಾರ್ಪಣ್ಯದಿಂದ ಕೂಡಿತ್ತು.ಮಹಿಳೆಯರ ಮೇಲೆ ಅತ್ಯಾಚಾರ,ಗುಂಡಿಕ್ಕಿ ಕೊಲ್ಲುವುದು ಸೇರಿದಂತೆ ಅನೇಕ ಪೈಶಾಚಿಕ ಕೃತ್ಯಗಳಿಂದ ಸಿಡಿದೆದ್ದು ದೊಡ್ಡ ಹೋರಾಟವೇ ನಡೆದು ಕೊನೆಗೆ ಉಕ್ಕಿನ ಮನುಷ್ಯ ಸರದಾರ ವಲ್ಲಬಾಯಿ ಪಟೇಲ್ ಅವರ ಕಾರ್ಯಾಚರಣೆಯಿಂದ ಸ್ವತಂತ್ರಗೊಂಡೆವು. ಇದನ್ನು ಮನಗಂಡು ಆ ಎಲ್ಲಾ ಮಹನೀಯರನ್ನು ಸ್ಮರಿಸಿಕೊಳ್ಳುವುದರ ಮೂಲಕ ಒಳ್ಳೆ ಸೌಹಾರ್ದತೆಯಿಂದ ಬದುಕು ಸಾಗಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಕಚೇರಿಯ ಸರ್ವ ಸಿಬ್ಬಂದಿಯವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here