ಶ್ರೀ ಡಾ. ರೇವಣಸಿದ್ದ ಶಿವಾಚಾರ್ಯರ ನೇತೃತ್ವದಲ್ಲಿ ಡಿ. 5 ರಂದು ಜಿಲ್ಲಾಧಿಕಾರಿ ಹತ್ತಿರ ನಿಯೋಗದ

0
47

ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿ ಸೀಮೆಯ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಪೂಜ್ಯ ಶ್ರೀ ಸಂತ ಸೇವಾಲಾಲ ಮಹಾರಾಜರ ಮತ್ತು ಮರಿಯಮ್ಮ ದೇವಿ ದೇವಸ್ಥಾನ ಕಟ್ಟಡ ನೆಲಸಮಗೊಳಿಸಿರುವುದನ್ನು ಹಾಗೂ ದೇವರ ಮೂರ್ತಿಗಳನ್ನು ಭಗ್ನಗೊಳಿಸಿರುವದನ್ನು ಖಂಡಿಸಿ ಶ್ರೀ ಗುರು ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಡಾ. ರೇವಣಸಿದ್ದ ಶಿವಾಚಾರ್ಯರ ನೇತೃತ್ವದಲ್ಲಿ ಡಿ. 5 ರಂದು ಹಮ್ಮಿಕೊಂಡಿದ್ದ ರಸ್ತೆ ತಡೆಯನ್ನು ಕೈಬಿಟ್ಟು ಜಿಲ್ಲಾಧಿಕಾರಿಗಳಿಗೆ ನಿಯೋಗದ ಮೂಲಕ ಭೇಟಿಯಾಗಿ ಪ್ರಕರಣದ ಕುರಿತು ವಿವರಿಸಲು ನಿರ್ಧರಿಸಲಾಗಿದೆ ಎಂದು ನಾಗಲಿಂಗಯ್ಯ ಮಠಪತಿ ತಿಳಿಸಿದ್ದಾರೆ.

5 ರಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಧಿಕಾರಿಗಳಿಗೆ ಪೂಜ್ಯರ ನೇತೃತ್ವದಲ್ಲಿ ನಿಯೋಗದ ಮೂಲಕ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೋರಲಾಗುವುದೆಂದು ಮಠಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here