ಬಸ್ ದರ ಏರಿಸಿ ಬರೆ ಎಳೆದ ಸರಕಾರ

0
75

ವಾಡಿ: ಶೇ.೧೨ರಷ್ಟು ಬಸ್ ದರ ಏರಿಕೆ ಮಾಡುವ ಮೂಲಕ ಸರಕಾರ ಪ್ರಯಾಣಿಕರ ಎದೆಗೆ ಮತ್ತೊಂದು ಬರೆ ಎಳೆದಿದೆ. ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ದೂರಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ಮಾಡಿರುವ ಕೆಎಸ್‌ಆರ್‌ಟಿಸಿ ಇಲಾಖೆಯ ಕ್ರಮವನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಜನವಿರೋಧಿ ಸರಕಾರಗಳಿಂದ ಜನರು ಒಳ್ಳೆಯದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಈಗಾಗಲೇ ಹಾಲು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಇನ್ನಿತರ ಅವಶ್ಯಕ ವಸ್ತುಗಳ ದರ ಏರಿಕೆಗಳಿಂದ ದೇಶದ ಜನಸಾಮಾನ್ಯರು ತೀವ್ರವಾದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಳೆದ ಎರಡು ವರ್ಷಗಳ ಸತತ ಪ್ರವಾಹದಿಂದ ಸಂತ್ರಸ್ಥರಾದ ಜನತೆಯು ಇನ್ನೂ ಚೇತರಿಸಿಕೊಂಡಿಲ್ಲ. ದೇಶದಲ್ಲಿ ಹರಡುತ್ತಿರುವ ಅರ್ಥಿಕ ಬಿಕ್ಕಟ್ಟು ಮತ್ತು ಉದ್ಯೋಗ ನಾಶಗಳು ಜನರ ಆದಾಯವನ್ನು ಕುಂಠಿತಗೊಳಿಸಿವೆ.

Contact Your\'s Advertisement; 9902492681

ಕೆಎಸ್‌ಆರ್‌ಟಿಸಿಯಂತಹ ಸಾರ್ವಜನಿಕ ಸಾರಿಗೆಯನ್ನು ಬಳಸುವವರು ಬಹುತೇಕ ದುಡಿಯುವ ಬಡಜನಗಳೇ ಆಗಿದ್ದಾರೆ. ಇಂಥಹ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾದ ಒಂದು ಪ್ರಜಾಪ್ರಭುತ್ವದ ಸರಕಾರ, ಗಾಯದ ಮೇಲೆ ಬರೆ ಎಳೆಯುವ ಮೂಲಕ ಜನದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಲ್ಲಿರುವ ಭ್ರಷ್ಟಾಚಾರ ಮತ್ತು ದುಂದುವೆಚ್ಚಗಳನ್ನು ನಿಯಂತ್ರಿಸಿ, ತಕ್ಷಣವೇ ಬಸ್ ದರ ಏರಿಕೆ ತೀರ್ಮಾನ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here