ಸುರಪುರ: ನಗರದ ಪೋಲಿಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ೧೦:೩೦ ಕ್ಕೆ ಸುರಪುರ, ಶಹಾಪುರ ಮತ್ತು ಹುಣಸಗಿ ತಾಲೂಕುಗಳ ಎಲ್ಲಾ ದಲಿತಪರ ಸಂಘಟನೆಗಳ ಮುಖಂಡರ ಸಭೆಯನ್ನು ಕರೆಯಲಾಗಿದೆ ಎಂದು ಸುರಪುರ ಉಪ ವಿಭಾಗದ ಉಪ ಅಧೀಕ್ಷಕ (DYSP) ವೆಂಕಟೇಶ ಹುಗಿಬಂಡಿಯವರು ತಿಳಿಸಿದ್ದಾರೆ.
ಮೂರು ತಾಲೂಕುಗಳಲ್ಲಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರೋಪಾಯಗಳ ಕಂಡುಕೊಳ್ಳಲು ಎಲ್ಲಾ ಸಂಘಟಕರು ಸಭೆಯಲ್ಲಿ ಭಾಗವಹಿಸಿ ಕುಂದು ಕೊರತೆಗಳ ಕುರಿತು ಚರ್ಚಿಸಲು ಸಭೆಗೆ ಆಗಮಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.