ಕಲಬುರಗಿಯ 19 ಜನ ಕ್ವಾರಂಟೈನ್ ನಲ್ಲಿ : ಗೋವಿಂದ ಎಂ ಕಾರಜೋಳ

0
77

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ , ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯ ದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಕಾರಜೋಳ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here