ಶಹಾಪುರ: ದೇಶದಾದ್ಯಂತ ಕರೋನಾ ಭೀತಿಯಿಂದ ಲಾಕ್ ಡೌನ್ ಆಗಿದೆ,ಆದರೆ ಶಹಾಪುರದಲ್ಲಿ ವಿಪರೀತ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆದಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ಯುವ ಸೇನೆಯ ತಾಲ್ಲೂಕು ಅಧ್ಯಕ್ಷರಾದ ಭೀಮಾಶಂಕರ ಕಟ್ಟಿಮನಿ ಆಗ್ರಹಿಸಿದ್ದಾರೆ.
ಶಹಾಪುರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ ವೈನ್ ಶಾಪ್ಗಳು ಬಾರ್ಗಳು ಬಂದಾದರೂ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆಯಲ್ಲಿ ತೊಡಗಿದ್ದಾರೆ.
ಈ ವಿಷಯ ಅಬಕಾರಿ ಇಲಾಖೆಗೆ ಗೊತ್ತಾದರೂ ಕೂಡ ಜಾಣ ಕಿವುಡರಂತೆ ವರ್ತಿಸುತ್ತಿದ್ದಾರೆ.
ದಿನದ ವಹಿವಾಟಿಗಿಂತ ಲಾಗ್ ಡೌನ್ ಹಿನ್ನೆಲೆಯಲ್ಲಿ ದುಪ್ಪಟ್ಟು ಅಕ್ರಮ ಮಧ್ಯ ಮಾರಾಟವಾಗುತ್ತಿದೆ ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಅನುಭವಿಸಬೇಕಾಗಿದೆ. ಸರಕಾರ ಮದ್ಯ ಮಾರಾಟ ನಿಷೇಧ ಮಾಡಿದರೂ ಕೂಡ ಶಹಾಪುರದ ಕೆಲವೊಂದು ವೈನ್ಶಾಪ್ ಬಾರ್ ಗಳಿಂದ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಸರ್ಕಾರದ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.