- ಬಸವರಾಜ ಸಿನ್ನೂರ
ಶಹಾಪುರ: ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಆವರಣದ ಮುಂಭಾಗದಲ್ಲಿರುವ ಅವ್ಯವಸ್ಥೆ ನೋಡಿ ಪಾಲಕರಲ್ಲಿ ಆತಂಕ ಶುರುವಾಗಿದೆ.
ಶಾಲೆಯ ಗೇಟ್ ತೆರೆಯದೇ ತುಕ್ಕು ಹಿಡಿದು ಸಂಪೂರ್ಣ ಹಾಳಾಗಿ ಹೋಗಿದೆ.ಮುಖ್ಯದ್ವಾರದಲ್ಲಿ ಕಡ್ಡಿ ಕಸ ಬೆಳೆದು ಹುಳ ಹುಪ್ಪಡಿಗಳು ಸೇರಿಕೊಳ್ಳುವುದರಿಂದ ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು ಇದೇ ಮುಖ್ಯ ದ್ವಾರದಿಂದ ಮಕ್ಕಳು ಜೀವ ಕೈಯಲ್ಲಿಡಿದು ಶಾಲೆಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ,ದಯವಿಟ್ಟು ಶಿಕ್ಷಣ ಇಲಾಖೆಯ ಮೇಲಧಿಕಾರಿಗಳು ಇತ್ತ ಗಮನಹರಿಸಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸೋಫಿಸಾಬ್ ಕನ್ಯಾಕೋಳೂರು ಮನವಿ ಮಾಡಿಕೊಂಡಿದ್ದಾರೆ.