ಮಕ್ಕಳಿಗೆ ನೈತಿಕ ಶಿಕ್ಷಣ ಅವಶ್ಯಕ : ಗುರುಪಾಟೀಲ್ ಶಿರವಾಳ

0
155

ಶಹಾಪುರ : ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿದರೆ ಮಾತ್ರ ಮುಂಬರುವ ದಿನಗಳಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ ಪ್ರತಿಯೊಬ್ಬರೂ ಉತ್ತಮವಾದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮಾಜಿ ಶಾಸಕರಾದ ಗುರು ಪಾಟೀಲ ಶಿರವಾಳ ಹೇಳಿದರು.

ಶಿಕ್ಷಣ ಇಲಾಖೆ ರೂಪಿಸಿರುವ ವಿದ್ಯಾಗಮ ಯೋಜನೆಯಡಿಯಲ್ಲಿ ಗುರು ಪಾಟೀಲ್ ಶಿರವಾಳ ಗ್ರಾಮದ ಹೊರವಲಯದ ಆಲದ ಮರದ ಕೆಳಗೆ ಮಕ್ಕಳಿಗೆ ಪಾಠ ಮಾಡಿ ಮಾತನಾಡಿದರು ಜೊತೆಗೆ ಕೋರೋನಾ ವೈರಸ್ ಬಗ್ಗೆ ಮಕ್ಕಳಿಗೆ ತಿಳಿಪಡಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವರಿಕೆ ಮಾಡಿಕೊಟ್ಟರು.

Contact Your\'s Advertisement; 9902492681

ದೊಡ್ಡ ಆಲದ ಮರದ ಕೆಳಗೆ ಪಾಠ ಹೇಳುತ್ತಿರುವ ಶಿಕ್ಷಕರು ಹಾಗೂ ಆಲಿಸುತ್ತಿರುವ ವಿದ್ಯಾರ್ಥಿಗಳಿಗೆ ಗುರುಕುಲ ಶಿಕ್ಷಣ ನೆನಪು ತಂದು ಕೊಟ್ಟಿತು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕರಾದ ಅಶೋಕ್ ಚೌಧರಿ ಸಂತೋಷ್ ಹಾಗೂ ಇತರರು ಉಸ್ಥಿತರಿದ್ದರು .

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here