ದಾವಣಗೆರೆ: ತುರ್ತು ಸೇವೆಗೆ ಒಂದೇ ಸಂಖ್ಯೆ 112: ಎಸ್‍ಪಿ ಹನುಮಂತರಾಯ

0
29

ದಾವಣಗೆರೆ: ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂಜನೆಗಾಗಿ “ತುರ್ತು ಸ್ಪಂದನ ವ್ಯವಸ್ಥೆ-112” ಎಂಬ ಹೊಸ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಪೊಲೀಸ್, ಅಗ್ನಿ ಶಾಮಕ, ಆಂಬುಲೆನ್ಸ್‍ಗಾಗಿ ಬೇರೆ ಬೇರೆ ಸಹಾಯವಾಣಿಗೆ ಕರೆ ಮಾಡುವ ಅಗತ್ಯವಿಲ್ಲ, ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ನಿಮಗೆ ಲಭಿಸಲಿದೆ ಎಂದು ಎಸ್‍ಪಿ ಹನುಮಂತರಾಯ ತಿಳಿಸಿದರು.

ಈ ಸೇವೆ ಕುರಿತು ಮಾಹಿತಿ ನೀಡಲು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ಸೇವೆಯು ಅಕ್ಟೋಬರ್ 01 ರಿಂದ ಜಿಲ್ಲೆಯಲ್ಲಿ ಆರಂಭಗೊಂಡಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಸಹಾಯವಾಣಿ ಜಾರಿಯಾಗಿದ್ದು ಇದರಲ್ಲಿ ದಾವಣಗೆರೆ ಜಿಲ್ಲೆಯೂ ಒಳಗೊಂಡಿದೆ.

Contact Your\'s Advertisement; 9902492681

ಅಗ್ನಿ ಶಾಮಕ ದಳದ ನೆರವು/ಆಂಬುಲೆನ್ಸ್ ನೆರವು/ಪೊಲೀಸ್ ನೇರವು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು (ಇಖSS) ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ಜಿಲ್ಲೆಯ ಎಲ್ಲಿದಂಲೇ ಕರೆ ಬಂದರೂ ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ

112 ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕೀಕೃತ ತರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15 ನಿಮಿಷದಲ್ಲಿಯೇ ಇಆರ್‍ಎಸ್‍ಎಸ್ ವಾಹನ ಅಲ್ಲಿಗೆ ತಲುಪಿ ಸಂಕಷ್ಟದಲ್ಲಿರುವವರಿಗೆ ತುರ್ತು ನೆರವಾಗುವ ವ್ಯವಸ್ಥೆ ಇದಾಗಿದೆ.

ಇಲಾಖೆಯಿಂದ ದಾವಣಗೆರೆ ಜಿಲ್ಲೆಗೆ ಈ ಉದ್ದೇಶಕ್ಕಾಗಿಯೇ 13 ಬೀಟ್ ವಾಹನ ಪೂರೈಸಲಾಗಿದೆ. ಒಂದು ವಾಹನದಲ್ಲಿ ಎಎಸ್‍ಐ, ಕಾನ್ಸ್‍ಟೇಬಲ್, ಚಾಲಕ ಸೇರಿ ಮೂರು ಸಿಬ್ಬಂದಿಗಳಿರುತ್ತಾರೆ. ಸಂರಕ್ಷಣಾ ಸಲಕರಣೆಗಳು ಇಆರ್‍ಎಸ್‍ಎಸ್ ವಾಹನದಲ್ಲಿರುತ್ತವೆ. 24×7 ತುರ್ತು ಸ್ಪಂದನಾ ಕರ್ತವ್ಯಕ್ಕೆ ಈಗಾಗಲೇ 65 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ 26 ಚಾಲಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ದಿನದ 24 ತಾಸು ಪ್ರಾಯೋಗಿಕವಾಗಿ ಚಟುವಟಿಕೆ ಪ್ರಾರಂಭವಾಗಿದೆ.

ಇನ್ನು ಮುಂದೆ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಮ್-100, ಅಗ್ನಿಶಾಮಕದ-101, ಆರೋಗ್ಯ ಇಲಾಖೆಯ-108 ಸಹಾಯವಾಣಿ ಸಂಖ್ಯೆಗಳು ನೂತನ ಸಹಾಯವಾಣಿ ಸಂಖ್ಯೆ 112 ರಲ್ಲಿ ವಿಲೀನವಾಗಿದೆ.

ಆ್ಯಪ್ ಕೂಡ ಲಭ್ಯ: 112 ತುರ್ತು ಸಹಾಯವಾಣಿ ನೆರವು ಪಡೆಯಲು ನೇರ ಕರೆ ಮಾಡಬಹುದು ಅಥವಾ ಗೂಗಲ್ ಪ್ಲೇ ಸ್ಟೋರ್ ಮತ್ತು ಐಓಎಸ್ ಆ್ಯಪ್ ಸ್ಟೋರ್‍ನಲ್ಲಿ ಕೆಪಿಎಸ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here