ಕಲಬುರಗಿ: ಲಿಂಗಾಯತ ಸ್ವತಂತ್ರ ಧರ್ಮ ಜಾಗ್ರತೆ ಹಾಗೂ ಸಂಘಟನೆ ಹಿನ್ನೆಲಡಯಲ್ಲಿ ಇದೇ ಅಕ್ಟೋಬರ್ ೧೮ರಂದು ಆಳಂದ ಪಟ್ಟಣದ ಜಗದ್ಗುರು ತೋಂಟದಾರ್ಯ ಮಠದಲ್ಲಿ ಬೆಳಗ್ಗೆ ೧೦.೩೦ರಿಂದ ಸಂಜೆ ೫ ಗಂಟೆಯವರೆಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ಮತ್ತು ರವೀಂದ್ರ ಶಾಬಾದಿ ತಿಳಿಸಿದರು.
ಉಸ್ತುರಿ-ಧುತ್ತರಗಾಂವ ಮಠದ ಕೋರಣೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ವಿಭಾಗೀಯ ಮತ್ತು ಮಹಾರಾಷ್ಟ್ರದ ಪ್ರಮುಖ ಲಿಂಗಾಯತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಇಂದಿಲ್ಲಿ ಪ್ರತ್ರುಕಾಗೋಷ್ಠಿಯಲ್ಲಿ ತಿಳಿಸಿದರು.
ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ ರೂಪುರೇಷೆ, ಲಿಂಗಾಯತ ಜಾತಿ ಪ್ರಮಾಣ ಪತ್ರ ಕೊಡುವುದು, ಲಿಂಗಾಯತ ಒಳಪಂಗಡ (ವೀರಶೈವ) ಸಮಸ್ಯೆ ಹಾಗೂ ಇನ್ನಿತರ ವಿಷಯ ಕುರಿತು ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಬಸವರಾಜ ಮೊರಬದ, ಜಗದೀಶ ಪಾಟೀಲ, ಶಶಿಕಾಂತ ಪಸಾರ ಇತರರು ಇದ್ದರು.