ತಿಂಥಣಿಯಲ್ಲಿ ಯೂತ್ ಕಾಂಗ್ರೆಸ್‌ನಿಂದ ಕೊರೊನಾ ತಪಾಸಣಾ ಶಿಬಿರ

0
39

ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಸಲಹೆಯಂತೆ ಇಂದು ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಸಂಚರಿಸಿ ಕೊರೊನಾ ತಪಾಸಣೆ ನಡೆಸಲಾಗುತ್ತಿದೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮಂಜುನಾಥ ಸಾಹುಕಾರ ತಿಳಿಸಿದರು.

ತಾಲೂಕಿನ ತಿಂಥಣಿ ಗ್ರಾಮದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕೊರೊನಾ ತಪಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ,ಇಂದು ಎಲ್ಲೆಡೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ ಆದರೆ ಸರಕಾರ ಮಾತ್ರ ಇದನ್ನು ನಿರ್ಮೂಲನೆ ಮಾಡದೆ ನಿರ್ಲಕ್ಷ್ಯ ತೋರಿದೆ,ಆದ್ದರಿಂದ ನಮ್ಮ ಕೆಪಿಸಿಸಿ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಇಂದು ಎಲ್ಲಾ ಗ್ರಾಮಗಳಲ್ಲೂ ನಮ್ಮ ಯೂತ್ ಕಾಂಗ್ರೆಸ್ ತಂಡ ಜನರ ಮನೆ ಬಾಗಿಲಿಗೆ ಹೋಗಿ ಕೊರನಾ ತಪಾಸಣೆ ನಡೆಸಲಿದೆ ಎಂದರು.

Contact Your\'s Advertisement; 9902492681

ತಿಂಥಣಿ ಗ್ರಾಮದಲ್ಲಿ ನಡೆದ ತಪಾಸಣಾ ಶಿಬಿರದಲ್ಲಿ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಗಂಗಾಧರ ನಾಯಕ ತಿಂಥಣಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು.ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್‌ನ ಅನೇಕ ಮುಖಂಡರುಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here