ಶಹಾಪುರ: ತಾಲ್ಲೂಕಿನ ಸಗರ ಗ್ರಾಮದಿಂದ ಸೂಫಿ ಸರಮಸ ದರ್ಗಾಕೆ ಹೋಗುವ ರಸ್ತೆಯ ಮಧ್ಯದಲ್ಲಿ ವಿದ್ಯುತ್ ಕಂಬವೊಂದು ರಸ್ತೆಗೆವಾಲಿರವುದು ಕಂಡುಬಂದಿದೆ.
ಇಲ್ಲಿ ಯಾವುದೇ ಸಂದರ್ಭದಲ್ಲಿ ಅವಗಢ ಸಂಭವಿಸುವ ಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಇದನ್ನು ದುರಸ್ತಿಗೊಳಿಸಬೇಕು ಎಂದು ರೈತಸಂಘದ ಮುಖಂಡರಾದ ಮಹೇಶಗೌಡ ಸುಬೇದಾರ ಅವರು ತಿಳಿಸಿದ್ದಾರೆ.
ಈ ಮಾರ್ಗ ಮಧ್ಯದಲ್ಲಿ ರಸ್ತೆ ನವೀಕರಣ ನಡೆದರೂ ಗುತ್ತಿಗೆದಾರರು ವಿದ್ಯುತ್ ಕಂಬವನ್ನು ಅಲ್ಲೆ ಬಿಟ್ಟು ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ,ಏನಾದರೂ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.