ಕಲಬುರಗಿ: ನಗರಕ್ಕೆ ಇಂದು ಆಗಮಿಸಿದ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಸಂದೀಪಕುಮಾರ್ ಕೆ.ಸಿ. ಯವರು ನಗರದ ಹೊರವಲಯದಲ್ಲಿರುವ ಬುದ್ಧ ವಿಹಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿದ್ಧಾರ್ಥ ಬುದ್ಧ ವಿಹಾರದ ಪೂಜ್ಯ ಭಂತೆ ಸಂಘಾನಂದ ಜಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ್ ಪಾಲಂ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ತೆಗನೂರ, ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಪ್ರಧಾನ ಕಾರ್ಯದರ್ಶಿ ವಿನಯ ವಲ್ಲಾಪೂರೆ, ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳು
ಹಾಗೂ ಕಾರ್ಯಕರ್ತರಿದ್ದರು.