ಸುರಪುರ: ತಾಲೂಕಿನಾದ್ಯಂತ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದರಿಸುತ್ತಿದ್ದು ಸರಕಾರದ ನಿರ್ಲಕ್ಷ್ಯ ತೋರಿದೆ,ಕೂಡಲೇ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅಖಿಲ ಕರ್ನಾಕಟ ನಿಖಿಲ್ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಯುವ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯಿಂದ ನಗರದ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ತಾಲೂಕಿನಲ್ಲಿಯ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರಲು ಬಸ್ಗಳ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಿದ್ದಾರೆ.ಕೂಡಲೆ ಬಸ್ ಆರಂಭಿಸಬೇಕು.ಇನ್ನೂ ಅನೇಕ ಹಾಸ್ಟೆಲ್ಗಳು ಆರಂಭಿಸಿಲ್ಲ,ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಇಲ್ಲದೆ ತೀವ್ರ ತೊಂದರೆಯಾಗಿದೆ,ಹಾಸ್ಟೆಲ್ ಆರಂಭಿಸಬೇಕು.
ಬೋನಾಳ ಕೆರೆ ಪಕ್ಷಿಧಾಮ ಅಭಿವೃಧ್ಧಿಪಡಿಸಬೇಕು,ನಗರದ ಎರಡು ಕಡೆಗಳಲ್ಲಿ ನಿರ್ಮಿಸಿರುವ ಹೌಸಿಂಗ್ ಬೋರ್ಡ್ ಮನೆಗಳು ಹಾಳಾಗುತ್ತಿದ್ದು ಅವುಗಳ ನಿರ್ವಹಣೆ ಮಾಡಿ ಮನೆಗಳ ಹಂಚಿಕೆ ಮಾಡಬೇಕು,ವಿದ್ಯಾರ್ಥಿಗಳಿಗೆ ಪ್ರವಾಸದ ಸಹಾಯಧನ ನೀಡಬೇಕು,ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದ್ದು ಕೂಡಲೆ ಆರಂಭಿಸಬೇಕು,ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿದ್ದು ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಂತರ ಪ್ರಾದೇಶಿಕ ಆಯುಕ್ತರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲ ಬಾಗಲಕೋಟೆ ತಿಪ್ಪಣ್ಣ ಪಾಟೀಲ ಮಾನಯ್ಯ ದೊರೆ ಸೇರಿದಂತೆ ಅನೇಕರಿದ್ದರು.