Tuesday, July 16, 2024
ಮನೆಬಿಸಿ ಬಿಸಿ ಸುದ್ದಿಶರಣಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾಚಿಗೆ ಯುವ ವಿಜ್ಞಾನಿ ಪ್ರಶಸ್ತಿ

ಶರಣಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾಚಿಗೆ ಯುವ ವಿಜ್ಞಾನಿ ಪ್ರಶಸ್ತಿ

ಸುರಪುರ: ಯಾದಗಿರ ಜಿಲ್ಲೆಯಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ತು ಬೆಂಗಳೂರ. ಆಯೊಜಿಸಿದ್ದ; ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯೊಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಯುವ ವಿಜ್ಞಾನ ಸ್ಪರ್ಧೆಯಲ್ಲಿ ಇಲ್ಲಿಯ ಶರಣಬಸವೇಶ್ವರ ಪ್ರೌಢ ಶಾಲೆಯ ೯ನೇ ತರಗತಿ ವಿದ್ಯಾರ್ಥಿಗಳಾದ ಪ್ರಾಚಿ ಅಂಬುರೆ, ಕುಮಾರಿ ತ್ರೀಶಂಕಾ ರೆಡ್ಡಿ ಹಾಗೂ ಮುಕುಂದ ಎಮ್. ಈ ಮೂವರು ಭಾಗವಹಿಸಿ ಅದರಲ್ಲಿ ಕುಮರಿ ಪ್ರಾಚಿ ಅಂಬುರೆ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣಬಸಪ್ಪ ವ್ಹಿ. ನಿಷ್ಟಿ ಜಹಾಗೀರದಾರ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಂಟಿ ಕಾರ್ಯದರ್ಶಿಗಳಾದ ಶ್ರೀ ದೊಡ್ಡಪ್ಪ ಎಸ್. ನಿಷ್ಟಿ, ಪ್ರಾಂಶುಪಾಲರು ಹಾಗೂ ಬೋದಕ ಬೋದಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ತುಂಬಾ ಹರ್ಷ ವ್ಯಕ್ತಪಡಿಸಿದ್ದಾರೆ.

 

RELATED ARTICLES

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular