ಅಗಲಿದ ಮಾಜಿ ಶಾಸಕ ವಾಲ್ಮೀಕಿಗೆ ನುಡಿನಮನ 5 ರಂದು

0
92

ವಾಡಿ: ಇತ್ತೀಚೆಗಷ್ಟೇ ನಿಧನರಾದ ಚಿತ್ತಾಪುರ ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಅವರ ನುಡಿನಮನ ಕಾರ್ಯಕ್ರಮ ಏ.೫ ರಂದು ಸಂಜೆ ೬:೦೦ ಗಂಟೆಗೆ ವಾಡಿ ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಏರ್ಪಡಿಸಲಾಗಿದೆ.

ಸಂಸದ ಡಾ.ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಶೀಲ ನಮೋಶಿ, ಭಾಜಪ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ವಾಡಿ ನಗರ ಶಕ್ತಿಕೇಂದ್ರ ಅಧ್ಯಕ್ಷ ಬಸವರಾಜ ಪಂಚಾಳ, ರಾಜ್ಯ ದ್ವಿದಳ ದಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ಹಾಗೂ ಪುರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ಭಾಜಪ ಕಾರ್ಯದರ್ಶಿ ವೀರಣ್ಣ ಯಾರಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here