ವಾಡಿ: ಸಮೀಪದ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಅವರು ಯೋಗ ಶಿಕ್ಷಕರಾಗಿ ನೇಮಕಗೊಂಡಿದ್ದಾರೆ.
ಕರ್ನಟಕ ಸರಕಾರದ ಪ್ರಸಕ್ತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಯೋಜನೆಯ ಸಿಪಿಎಚ್ಸಿ-ಯುಎಚ್ಸಿ ಕಾರ್ಯಕ್ರಮದಡಿ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ಆಧಾರಾದಡಿ ಯೋಗ ತರಬೇತಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, ವಾಡಿ ಪಟ್ಟಣದ ವೀರಣ್ಣ ಬಸವರಾಜ ಯಾರಿ ಅವರು ಯೋಗ ತರಬೇತಿದಾರರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಮಾಸಿಕ ಗೌರವಧನ ರೂ.೫೦೦೦ ನೀಡಲಾಗುವುದು ಎಂದು ಜಿಲ್ಲಾ ಸಮೀಕ್ಷಣಾಧಿಕಾರಿಗಳು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.