ಕಲಬುರಗಿ: ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್ಗಾಗಿ ರೋಗಿಗಳ ಪರದಾಟ ಮುಂದುವರೆದಿದ್ದು, ವೆಂಟಿಲೇಟರ್ ಮತ್ತು ಬೆಡ್ ಸಿಗದೆ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆ ಮುಂದು ವರೆದಿವೆ.
ನಾಲ್ಕು ಗಂಟೆಯಿಂದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಸಹ ಸರಿಯಾದ ಸಮಯಕ್ಕೆ ಬೆಡ್ ಹಾಗೂ ವೆಂಟಿಲೇಟರ್ ಸಿಗದೆ ಕೊರೊನಾ ಸೋಂಕಿತನೋರ್ವ ಕಾರಿನಲ್ಲೇ ಪ್ರಾಣ ಬಿಟ್ಟ ದಾರುಣ ಘಟನೆ ನಗರದ ಸತ್ಯ ಆಸ್ಪತ್ರೆ ಎದುರಿಗೆ ನಡೆದಿದೆ.
ಜಿಲ್ಲೆಯ ಕಾಳಗಿ ಪಟ್ಟಣದ ಶಂಕರ (50) ಮೃತ ರೋಗಿ. ಶಂಕರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಮೃತ ಶಂಕರ್ ಕುಂಟುಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.