ಸುರಪುರ: ಅಪ್ರಾಪ್ತ ಯುವತಿಯನ್ನು ಅಪಹರಿಸಿ ನಂತರ ಅತ್ಯಾಚಾರ ನಡೆಸಿ ಯುವತಿ ಸಾವಿಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಯನ್ನು ನೀಡುವಂತೆ ಮುಖಂಡರು ಒತ್ತಾಯಿಸಿದರು.
ಸುರಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕ ರಾಜುಗೌಡ ಕೋವಿಡ್-೧೯ ಸಭೆ
ಹುಣಸಗಿ ಪಟ್ಟಣದಲ್ಲಿ ತಹಸೀಲ್ ಕಚೇರಿ ಬಳಿ ಪ್ರತಿ ಭಟನೆ ನಡೆಸಿ ಮಾತನಾಡಿದ ಅನೇಕ ಮುಖಂಡರು,೧೭ ವರ್ಷದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವುದು ಮಾನವ ಸಮಾಜವೇ ತಲೆ ತಗ್ಗಿಸುವಂತ ಘಟನೆಯಾಗಿದೆ.ಈ ಘಟನೆಯಲ್ಲಿನ ಎಲ್ಲಾ ಆರೋಪಿಗಳನ್ನು ಬಂಧಿಸಿ ಮತ್ತು ಯಾವುದೇ ವ್ಯಕ್ತಿಗಳ ಒತ್ತಡಗಳಿಗೆ ಮಣಿಯದೆ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು,ಇಲ್ಲವಾದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ಸೇರಿದಂತೆ ಎಲ್ಲಾ ಲಿಂಗಾಯತ ಸಂಘಟನೆಗಳು ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಗತಿಪರ ರೈತ ಬಸನಗೌಡ ಕಮತಗಿ ಕೊರೊನಕ್ಕೆ ಬಲಿ
ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ್ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕು ಅಧ್ಯಕ್ಷ ಮಂಜುನಾಥ ಬಳಿ ರಮೇಶ ವಾಲಿ ವಿಶ್ವನಾಥ ಬ್ಯಾಕೊಡ್ ಸಿದ್ದು ಸಾಹು ರೇವಡಿ ಸಿದ್ದು ಸಾಹು ಮುದಗಲ್ ಬಸವರಾಜ ಅಂಗಡಿ ಸೇರಿದಂತೆ ಅನೇಕರಿದ್ದರು.